ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಚಿವ ಸ್ಥಾನ ಕಳೆದುಕೊಳ್ಳುವ ಭಯವಿಲ್ಲ: ಡಿ.ಸುಧಾಕರ್ (D sudhakar | Karnataka | Congress | BJP | Yeddurappa)
Bookmark and Share Feedback Print
 
ಸಚಿವ ಸ್ಥಾನ ಕಳೆದುಕೊಳ್ಳುವ ಯಾವ ಭಯವೂ ಇಲ್ಲ ಎಂದು ಮುಜರಾಯಿ ಖಾತೆ ಸಚಿವ ಡಿ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಜರಾಯಿ ಖಾತೆ ಸಚಿವರಾದವರು ತಮ್ಮ ಸ್ಥಾನ ಕಳೆದುಕೊಳ್ಳುತ್ತಾರಲ್ಲ ಎಂಬ ಪ್ರಶ್ನೆಗೆ ಅವರು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದರು.

ಭಿಕ್ಷುಕರ ಸಾವಿನ ಪ್ರಕರಣದಿಂದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಸ್ಥಾನ ಕಳೆದುಕೊಂಡು ಇದೀಗ ಮುಜರಾಯಿ ಖಾತೆಗೆ ಸ್ಥಾನಪಲ್ಲಟಗೊಂಡ ನಂತರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿರುವ ಸುಪ್ರಸಿದ್ಧ ಶ್ರೀ ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ. ನಿರಾತಂಕವಾಗಿ ಇಲಾಖೆ ಕೆಲಸ ಮಾಡುತ್ತೇನೆ. ಖಾತೆ ನೀಡುವುದು, ಬದಲಾಯಿಸುವುದು ಮುಖ್ಯಮಂತ್ರಿಗಳಿಗೆ ಸೇರಿದ ಪರಮೋಚ್ಚ ಅಧಿಕಾರ. ಖಾತೆ ನೀಡಿದ ದಿನದಿಂದಲೇ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದೇನೆ. ಮುಜರಾಯಿ ಇಲಾಖೆಯಲ್ಲೂ ಸೇವೆ ಸಲ್ಲಿಸಲು ಉತ್ತಮ ಅವಕಾಶವಿದೆ. ಜಿಲ್ಲೆ, ರಾಜ್ಯದ ಎಲ್ಲ ದೇವಾಲಯಗಳ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದ ಸಚಿವ, ಹಿಂದೂ ದೇವಾಲಯಗಳಲ್ಲಿ ಅರ್ಚಕ ಹುದ್ದೆಗೆ ಮೀಸಲು ನಿಗದಿ ಮಾಡುವ ಯೋಜನೆ ಸದ್ಯಕ್ಕಿಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ