ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೆಂಗಳೂರು ಸ್ಫೋಟ-ಮದನಿ ಕೈವಾಡ ಸ್ಪಷ್ಟ: ಆಚಾರ್ಯ (Bangalore Blast | Acharya | PDP | Madani | Police)
Bookmark and Share Feedback Print
 
ಉದ್ಯಾನನಗರಿಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೇರಳದ ಪಿಡಿಪಿ ಮುಖ್ಯಸ್ಥ ಅಬ್ದುಲ್ ನಾಸಿರ್ ಮದನಿ ಕೈವಾಡ ಇರುವುದು ಸ್ಪಷ್ಟವಾಗಿದೆ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಸರಣಿ ಸ್ಫೋಟ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಅಧಿಕಾರಿಗಳ ಪ್ರಾಥಮಿಕ ವರದಿಯಲ್ಲಿ, ಮದನಿ ಕೈವಾಡ ಇರುವುದು ಸ್ಪಷ್ಟವಾಗಿದೆ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಆದರೆ ರಾಜ್ಯದ ವಿವಿಧ ಭಾಗಗಳಲ್ಲಿ ಚರ್ಚ್ ಮೇಲೆ ನಡೆದ ದಾಳಿಯ ಹಿಂದೆ ಮದನಿ ಕೈವಾಡ ಇದ್ದಂತಿಲ್ಲ ಎಂದರು. ಮದನಿಯನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸಬೇಕಾಗಿರುವುದರಿಂದ ಪೊಲೀಸ್ ಕಸ್ಟಡಿ ವಿಸ್ತರಿಸುವಂತೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಬೆಂಗಳೂರು ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ರಾಜ್ಯದ ಪೊಲೀಸರು ಸಾಕಷ್ಟು ಕಸರತ್ತು ನಡೆಸಿದ ನಂತರ ಇತ್ತೀಚೆಗಷ್ಟೇ ಮದನಿಯನ್ನು ಕೇರಳದ ಕೊಲ್ಲಂನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ರಹಸ್ಯ ಸ್ಥಳದಲ್ಲಿ ಪೊಲೀಸರು ಮದನಿಯ ವಿಚಾರಣೆ ನಡೆಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ