ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಕೇವಲ ಕಾಗದದ ಹುಲಿ: ಕುಮಾರಸ್ವಾಮಿ (Yeddyurappa | Gulbarga South | BJP | JDS | Kumaraswamy)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಜನರಿಗೆ ಸುಳ್ಳು ಭರವಸೆ ನೀಡಿ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಕೇವಲ ಕಾಗದದ ಹುಲಿ ಎಂದು ಟೀಕಿಸಿದ್ದಾರೆ.

ಗುಲ್ಬರ್ಗಾ ದಕ್ಷಿಣ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯ ಪರ ಮತಯಾಚಿಸಲು ನಗರಕ್ಕೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ಬಿಜೆಪಿ ರಾಜ್ಯದಲ್ಲಿ ಮಹತ್ತರವಾದ ಅಭಿವೃದ್ಧಿ ಮಾಡಿದೆ ಎಂದು ಬರೇ ಹೇಳಿಕೆಗಳನ್ನು ಮಾತ್ರ ನೀಡುತ್ತಿದೆ. ಇದರಿಂದಾಗಿ ಆಡಳಿತಾರೂಢ ಬಿಜೆಪಿ ಸರಕಾರ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಯಡಿಯೂರಪ್ಪ ಕೇವಲ ಕಾಗದದ ಹುಲಿ ಎಂದು ವ್ಯಂಗ್ಯವಾಡಿದರು.

ಆಪರೇಷನ್ ಕಮಲಕ್ಕೆ ಒಳಗಾಗಿರುವ ಶಾಸಕರ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶ್ವೇತ ಪತ್ರವನ್ನು ಹೊರಡಿಸಲಿ ಎಂದು ಅವರು ಒತ್ತಾಯಿಸಿದರು. ಆಪರೇಶನ್ ಕಮಲಕ್ಕೆ ಒಳಗಾಗಿರುವ ಶಾಸಕರ ಕ್ಷೇತ್ರದ ಅಭಿವೃದ್ದಿ ಇನ್ನೂ ಆಗಿಲ್ಲ. ಹಾಗೇನಾದರೂ ಶ್ವೇತ ಪತ್ರದಲ್ಲಿ ಕ್ಷೇತ್ರದ ಅಭಿವೃದ್ದಿಯಾಗಿದೆ ಎಂದು ಸಾಬೀತಾದಲ್ಲಿ ತಾವು ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಸವಾಲು ಹಾಕಿದರು.
ಸಂಬಂಧಿತ ಮಾಹಿತಿ ಹುಡುಕಿ