ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜಕೀಯ ದುಷ್ಟರ ದಮನ ಆಗಿದೆ: ಯಡಿಯೂರಪ್ಪ (BJP | Yeddyurappa | Congress | JDS | Mysore Dasara)
Bookmark and Share Feedback Print
 
ಸುಭದ್ರ ಸರಕಾರಕ್ಕೆ ಅಡ್ಡಿಯಾಗಿದ್ದ ದುಷ್ಟಶಕ್ತಿಗಳ ದಮನವಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್, ಜೆಡಿಎಸ್ ಮುಖಂಡರ ಹೆಸರು ಹೇಳದೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಅಂಗವಾಗಿ ಭಾನುವಾರ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ನೆರವೇರಿಸಿದ ನಂತರ ಅವರು ಮಾತನಾಡಿದರು.

ಉಳಿದ ಎರಡೂವರೆ ವರ್ಷದ ಅಧಿಕಾರದ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು, ದುಷ್ಟರ ದಮನ ಮತ್ತು ಶಿಷ್ಟರನ್ನು ಆಶೀರ್ವದಿಸುವ ನಂದಿಧ್ವಜ ಪೂಜೆಯಲ್ಲಿ ಸತತ ಮೂರನೇ ವರ್ಷ ಪಾಲ್ಗೊಳ್ಳುತ್ತಿರುವುದು ತನ್ನ ಸೌಭಾಗ್ಯ ಎಂದರು.

ಆಡಳಿತರೂಢ ಬಿಜೆಪಿ ಸರಕಾರವನ್ನು ಉರುಳಿಸಲು ಸಾಧ್ಯವಿಲ್ಲ ಎಂದು ವಿಶ್ವಾಸವ್ಯಕ್ತಪಡಿಸಿದ ಅವರು, ಸರಕಾರ ಸುಭದ್ರವಾಗಿದ್ದು ರಾಜ್ಯದ ಅಭಿವೃದ್ದಿಯತ್ತ ದಿಟ್ಟಹೆಜ್ಜೆ ಹಾಕುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ