ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜನ ಕ್ಷಮಿಸಬಹುದು; ದೇವರು ಕ್ಷಮಿಸಲ್ಲ: ಕಾಂಗ್ರೆಸ್‌ಗೆ ಸಿಎಂ (BJP | Congress | Yeddyurappa | Siddaramaiah | Desh pandy | JDS)
Bookmark and Share Feedback Print
 
NRB
'ಸಿದ್ದರಾಮಯ್ಯ, ದೇಶಪಾಂಡೆಯವರೇ ನಿಮ್ಮ ಪಾಪದ ಕೊಡ ತುಂಬಿದೆ. ಜನ ನಿಮ್ಮನ್ನು ಕ್ಷಮಿಸಬಹುದು, ಆದರೆ ದೇವರು ನಿಮ್ಮನ್ನು ಕ್ಷಮಿಸುವುದಿಲ್ಲ'...ಇದು ವಿಪಕ್ಷ ಮುಖಂಡರ ನಡವಳಿಕೆ ವಿರುದ್ಧ ರೋಸಿಹೋಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ ಪರಿ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಜನ ಪ್ರಬುದ್ಧರಾಗಿದ್ದಾರೆ. ಪ್ರತಿಪಕ್ಷಗಳ ಬ್ಲ್ಯಾಕ್‌ಮೇಲ್ ತಂತ್ರ ನಡೆಯೋದಿಲ್ಲ ಎಂಬುದನ್ನು ಸಿದ್ದರಾಮಯ್ಯ ಸೇರಿದಂತೆ ವಿಪಕ್ಷ ಮುಖಂಡರು ತಿಳಿದುಕೊಳ್ಳಬೇಕು ಎಂದರು.

ಬೆಂಗಳೂರು ಸುತ್ತಮುತ್ತ ಭೂ ಹಗರಣದಲ್ಲಿ ನಾನು ಶಾಮೀಲಾಗಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ದೇಶಪಾಂಡೆ ಆರೋಪಿಸುತ್ತಿದ್ದಾರೆ. ಹಾಗಾದರೆ ನಿಮ್ಮಲ್ಲಿ ದಾಖಲೆ ಇದ್ದರೆ ಬಹಿರಂಗಪಡಿಸಿ, ನಾನು ಯಾವುದೇ ತನಿಖೆಗೂ ಸಿದ್ದ ಎಂದು ಸವಾಲು ಹಾಕಿದರು.

ಬೆಂಗಳೂರು ಸುತ್ತಮುತ್ತ ಸಾಕಷ್ಟು ಭೂ ಹಗರಣ ನಡೆದಿದೆ. ಅದರಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷವೇ ಶಾಮೀಲಾಗಿದೆ ಎಂದು ದೂರಿರುವ ಮುಖ್ಯಮಂತ್ರಿಗಳು, ಆ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳನ್ನು ನೇಮಿಸಿ ವಿಪಕ್ಷ ಮುಖಂಡರ ಹಗರಣ ಬಯಲು ಮಾಡುವುದಾಗಿ ಕಿಡಿಕಾರಿದರು.

ನಮ್ಮ(ಬಿಜೆಪಿ) ಶಾಸಕರನ್ನು ಒತ್ತೆ ಇಟ್ಟುಕೊಂಡು, ನನ್ನ ಮನೆ ಮುಂದೆ ಧರಣಿ ನಡೆಸಲು ನಿಮಗೆ ಯಾವ ಯೋಗ್ಯತೆ ಇದೆ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ನೀವು ನಮ್ಮ ಮನೆ ಬಾಗಿಲಿಗೆ ಬಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದೀರಿ. ಮೊದಲು ನಿಮ್ಮನ್ನು ನೀವು ಪ್ರಶ್ನಿಸಿಕೊಳ್ಳಿ. ನಿಮ್ಮ ಪಾಪದ ಕೊಡ ತುಂಬಿದ್ದು, ಜನ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್, ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಂಬಂಧಿತ ಮಾಹಿತಿ ಹುಡುಕಿ