ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭಿಕ್ಷುಕರ ಕೇಂದ್ರದ ಸಾವು-ಸಿಓಡಿ ತನಿಖೆಗೆ: ಅಶೋಕ್ (Ashok | COD | BJP | Bangalore | Yeddyurappa)
Bookmark and Share Feedback Print
 
ನಗರದ ಮಾಗಡಿ ರಸ್ತೆಯಲ್ಲಿರುವ ಭಿಕ್ಷುಕರ ಕೇಂದ್ರದಲ್ಲಿ ಸಂಭವಿಸಿದ ಭಿಕ್ಷುಕರ ಕೇಂದ್ರದಲ್ಲಿ ಸಂಭವಿಸಿದ ಸರಣಿ ಸಾವಿನ ಪ್ರಕರಣದ ಬಗ್ಗೆ ಸಿಓಡಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಪ್ರಕರಣವನ್ನು ಸಿಓಡಿ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆಂದು ಈ ಸಂದರ್ಭದಲ್ಲಿ ಹೇಳಿದರು. ಭಿಕ್ಷುಕರ ಕೇಂದ್ರದಲ್ಲಿ ಶುಚಿತ್ವ ಮತ್ತು ಉತ್ತಮ ಆಹಾರ ಪೂರೈಕೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬೆಂಗಳೂರು ವರದಿಗಾರರ ಕೂಟ ಗುರುವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರ ಸಾಮೂಹಿಕ ವರ್ಗಾವಣೆ ಬಗ್ಗೆ ತಮಗೆ ಒಲವಿಲ್ಲ. ವರ್ಗಾವಣೆ ವ್ಯವಸ್ಥೆಯನ್ನು ಸುಧಾರಿಸಲು ಪ್ರತ್ಯೇಕ ಕಾಯ್ದೆಯೊಂದನ್ನು ರೂಪಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ