ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜೆಡಿಎಸ್‌ನಿಂದ ಬಿ.ಎಸ್.ಯಡಿಯೂರಪ್ಪ 'ಅಣುಕು ಶವಯಾತ್ರೆ' (Congress | Kumaraswamy | BJP | Yeddyurappa | Congress)
Bookmark and Share Feedback Print
 
ಪ್ರತಿಪಕ್ಷಗಳ ಶಾಸಕರನ್ನು ಬಿಜೆಪಿಗೆ ಸೆಳೆಯಲು ಆಪರೇಷನ್ ಕಮಲ ಕಾರ್ಯಾಚರಣೆ ನಡೆಸುತ್ತಿರುವ ಧೋರಣೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನಾ ರಾಲಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅಣುಕು ಶವಯಾತ್ರೆಯನ್ನು ನಡೆಸಿದರು.

ಕಾವೇರಿಪುರ ವಾರ್ಡ್ ಪಾಲಿಕೆ ಸದಸ್ಯ ಆರ್.ಪ್ರಕಾಶ್ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದಿಂದ ಹೌಸಿಂಗ್ ಬೋರ್ಡ್ ಕಾಲೋನಿವರೆಗೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಲ್ಲದೇ ಮುಖ್ಯಮಂತ್ರಿಯವರ ಪ್ರತಿಕೃತಿಯನ್ನು ಶವದಂತೆಯೇ ವಿಧಿವಿಧಾನಗಳೊಂದಿಗೆ ಅಣುಕು ಶವಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಸದಸ್ಯ ಪ್ರಕಾಶ್, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡಲು ಮುಖ್ಯಮಂತ್ರಿಗೆ ನೈತಿಕ ಹಕ್ಕಿಲ್ಲ ಎಂದರು.

ಇನ್ನು ಮುಂದೆ ಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದು. ಪ್ರಾಣಿ, ಪಕ್ಷಿಗಳಿಗೆ ಬಿಜೆಪಿಯವರು ಹೋಲಿಕೆ ಮಾಡಿ ಮಾತನಾಡಬಾರ ದು ಎಂದು ಎಚ್ಚರಿಕೆ ನೀಡಿದ ಪ್ರಕಾಶ್, ಇದು ಹೀಗೆ ಮುಂದುವರಿದರೆ ಜೆಡಿಎಸ್ ಪಕ್ಷ ವಿವಿಧ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ