ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕನ್ನಡ ಭಾಷೆ ವಿರುದ್ಧ ಪಿತೂರಿ ಮಾಡಿದ್ರೆ ಹುಷಾರ್! (Karnataka Rakshana vedike | Praveen Shetty | BJP)
Bookmark and Share Feedback Print
 
ಕನ್ನಡದ ವಿರುದ್ಧ ಕುತಂತ್ರ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಶಿವರಾಮೇಗೌಡ ಬಣ) ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯ ಅಂದಿನ ಮೇಯರ್ ವಿಜಯ್ ಮೋರೆ ಮುಖಕ್ಕೆ ಮಸಿ ಬಳಿದು ಐದು ವರ್ಷಗಳಾದ ಹಿನ್ನೆಲೆಯಲ್ಲಿ ನಗರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಆಚರಣೆ ವೇಳೆ ಅವರು ಮಾತನಾಡಿದರು.

ಕನ್ನಡಿಗರ ವಿರೋಧಿಯಾಗಿದ್ದ ವಿಜಯ್ ಮೋರೆಗೆ ಮಸಿ ಬಳಿಯುವ ಮೂಲಕ ಎಚ್ಚರಿಕೆ ನೀಡಲಾಯಿತು. ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಕೆಲಸವನ್ನು ಯಾರೇ ಮಾಡಿದರೂ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದರು.

ಮಹಾರಾಷ್ಟ್ರ ಏಕೀಕರಣ ಸಮಿತಿ ತನ್ನ ಪುಂಡಾಟಿಕೆಯನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ. ಸರಕಾರ ಕೂಡ ಎಂಇಎಸ್ ಪುಂಡಾಟಿಕೆಗೆ ಕಠಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ