ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಖ್ಯಮಂತ್ರಿ ಬದಲಾವಣೆ ಅಗತ್ಯವಿಲ್ಲ: ರೇಣುಕಾಚಾರ್ಯ (BJP | Renukacharya | Yeddyurappa | Congress | JDS)
Bookmark and Share Feedback Print
 
ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಯತ್ನಗಳು ನಡೆಯುತ್ತಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಅಬಕಾರಿ ಸಚಿವ ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.

ಈ ರಾಜ್ಯದ ಜನತೆ ಬಿಜೆಪಿ ಸರಕಾರವನ್ನು ಐದು ವರ್ಷ ಆಡಳಿತ ನಡೆಸಲು ಆಯ್ಕೆ ಮಾಡಿದೆ. ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರಲಿದ್ದಾರೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಬಿಜೆಪಿ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಪ್ರಯತ್ನಗಳು ನಡೆಯುತ್ತಿವೆ ಎನ್ನುವ ವರದಿಗಳು ಸರಿಯಲ್ಲ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ, ಅದರ ಅಗತ್ಯವೂ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿಗಳು ತಮ್ಮ ಮಕ್ಕಳಿಗೆ ಜಮೀನು ಮಂಜೂರು ಮಾಡಿರುವುದನ್ನು ಸಮರ್ಥಿಸಿಕೊಂಡ ರೇಣುಕಾಚಾರ್ಯ, ಮುಖ್ಯಮಂತ್ರಿ ಪುತ್ರರು ಉದ್ಯಮಿಗಳಾಗಬಾ ರದೆ ಎಂದು ಪ್ರಶ್ನಿಸಿ, ಕಾನೂನು ಬದ್ಧವಾಗಿಯೇ ಮುಖ್ಯಮಂತ್ರಿ ಕುಟುಂಬಕ್ಕೆ ಕೆಐಎಡಿಬಿ ಜಮೀನು ನೀಡಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ