ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಷ್ಟ್ರೀಯ ನಾಯಕರು ಸಿಎಂ ರಾಜೀನಾಮೆ ಪಡೆಯಲಿ: ಸಿದ್ದರಾಮಯ್ಯ (Siddaramaiah | BJP | Yeddyurappa | Nithin Gadkari | Ishwar Khandre)
Bookmark and Share Feedback Print
 
ಬಿಜೆಪಿ ರಾಷ್ಟ್ರೀಯ ನಾಯಕರಿಗೆ ತತ್ವ, ಸಿದ್ದಾಂತದಲ್ಲಿ ನಂಬಿಕೆ ಹಾಗೂ ನೈತಿಕತೆ ಇದ್ದರೆ ಭ್ರಷ್ಟಾಚಾರ, ಭೂ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆ ಪಡೆಯಲಿ ಎಂದು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ನಗರದ ಗಣೇಶ ಮೈದಾನದಲ್ಲಿ ಭಾನುವಾರ ನಡೆದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಶಾಸಕ ಈಶ್ವರ ಖಂಡ್ರೆ ಅಧಿಕಾರ ಸ್ವೀಕಾರ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ನಮ್ಮದು ಸೈದ್ದಾಂತಿಕ ಪಕ್ಷ ಎಂದು ಹೇಳಿಕೊಳ್ಳುವ ನಾಯಕರಿಗೆ ಯಡಿಯೂರಪ್ಪ ಮತ್ತವರ ಕುಟುಂಬದವರ ಅಕ್ರಮ ಮತ್ತು ಸ್ವಜನಪಕ್ಷಪಾತ ಕಾಣುತ್ತಿಲ್ಲವೆ ಎಂದು ಪ್ರಶ್ನಿಸಿದರು.

ಆದರ್ಶ ಹೌಸಿಂಗ್ ಯೋಜನೆಯಲ್ಲಿ ಮನೆ ಮಂಜೂರಿಗೆ ಶಿಫಾರಸ್ಸು ಪತ್ರ ನೀಡಿದ್ದಾರೆಂಬ ಕಾರಣಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ ಚವಾಣ್ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಗಡ್ಕರಿ, ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್, ಅರುಣ ಜೇಟ್ಲಿ ಇನ್ನಿತರೆ ಮುಖಂಡರು ಯಡಿಯೂರಪ್ಪನವರ ಕರ್ಮಕಾಂಡದ ಬಗ್ಗೆ ಚಕಾರ ಎತ್ತುತ್ತಿಲ್ಲವೇಕೆ? ನಿಮಗೆ ಮರ್ಯಾದೆ, ನೈತಿಕತೆ ಇದ್ದರೆ ತಕ್ಷಣ ಸಿಎಂ ರಾಜೀನಾಮೆ ಪಡೆಯಿರಿ ಎಂದು ಒತ್ತಾಯಿಸಿದರು.

ಭ್ರಷ್ಟಾಚಾರದ ಮಾತು ಬಂದಾಗ ಅಶೋಕ ಚವಾಣ್ ಅಷ್ಟೇ, ಯಡಿಯೂರಪ್ಪ ಅವರೂ ಅಷ್ಟೇ ಎಂಬುದನ್ನು ಬಿಜೆಪಿಯವರು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ