ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವರಿಷ್ಠರ ತೀರ್ಮಾನಕ್ಕೆ ತಲೆಬಾಗಲೇಬೇಕು: ಈಶ್ವರಪ್ಪ ಸ್ಪಷ್ಟೋಕ್ತಿ (Eshwarapa | Yadyurappa | Karnataka | BJP)
Bookmark and Share Feedback Print
 
ಸಿಎಂ ಯಡಿಯೂರಪ್ಪ ತಲೆದಂಡ ವಿಚಾರದಲ್ಲಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ನಾಯಕತ್ವ ಬದಲಾವಣೆಯ ಅವಶ್ಯಕತೆಯಿಲ್ಲ ಎಂಬುದನ್ನು ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೇವೆ. ಆದರೆ ಅಂತಿಮವಾಗಿ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ತಲೆಬಾಗಲೇಬೇಕು ಎಂದವರು ಶಿವಮೊಗ್ಗದಲ್ಲಿ ತಿಳಿಸಿದರು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಾಯಕತ್ವ ಬದಲಾವಣೆ ಆಗಬಾರದೆಂಬ ಅಭಿಪ್ರಾಯವನ್ನು ಈಶ್ವರಪ್ಪ ವ್ಯಕ್ತಪಡಿಸಿದರು. ರಾಜ್ಯ ಬಜೆಪಿನಲ್ಲಿ ಯಾವುದೇ ಬಣ ಇಲ್ಲ. ಆದರೆ ಪಕ್ಷದ ಆಂತರಿಕ ವಿಷಯಗಳ ಕುರಿತು ಚರ್ಚೆ ಮಾಡಲು ಇಷ್ಟಪಡುವುದಿಲ್ಲ ಎಂದವರು ತಿಳಿಸಿದರು.

ಪಂಚಾಯಚ್, ತಾಲೂಕು ಚುನಾವಣೆ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಮಾಡುವುದು ಸರಿಯಲ್ಲ. ಇದನ್ನು ವರಿಷ್ಠರಿಗೆ ಮನವರಿಕೆ ಮಾಡಲಾಗಿದೆ. ಆದರೆ ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದವರು ತಿಳಿಸಿದರು.

ಅದೇ ಹೊತ್ತಿಗೆ ಪ್ರತಿಪಕ್ಷ ವಿರುದ್ಧ ಹಾರಿಹಾಯ್ದಿರುವ ಈಶ್ವರಪ್ಪ, ಜೆಡಿಎಸ್‌ನಿಂದ ಕುತಂತ್ರ ರಾಜಕಾರಣ ನಡೆಯುತ್ತಿದೆ ಎಂದು ಆಪಾದಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ