ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜೆಡಿಎಸ್‌ಗೆ ಪ್ರತಿಪಕ್ಷ ಸ್ಥಾನವೇ ಗತಿ: ರೇಣುಕಾಚಾರ್ಯ ಎಚ್ಚರಿಕೆ (Renukachrya | JDS | Kumaraswamy | BJP | Yeddyurappa)
Bookmark and Share Feedback Print
 
ಬಿಜೆಪಿ ವಿರುದ್ಧ ಕುತಂತ್ರ ಮುಂದುವರಿಸಿದ್ದೇ ಆದಲ್ಲಿ ಜೆಡಿಎಸ್‌ಗೆ ಪ್ರತಿಪಕ್ಷ ಸ್ಥಾನವೇ ಗತಿ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವರೂ ಆಗಿರುವ ರೇಣುಕಾಚಾರ್ಯ ಎಚ್ಚರಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವೀರಶೈವ ಜನಾಂಗದ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದನ್ನು ಸಹಿಸದ ಜೆಡಿಎಸ್, ಎರಡೂವರೆ ವರ್ಷದಿಂದ ನಿರಂತರವಾಗಿ ಕುತಂತ್ರ ನಡೆಸಿಕೊಂಡು ಬಂದಿದೆ. ಪ್ರಸ್ತುತ ಕಾಂಗ್ರೆಸ್ ಜತೆ ಕೈಜೋಡಿಸಿ ಅಧಿಕಾರ ಹಿಡಿಯುವ ಜೆಡಿಎಸ್‌ನ ಹಗಲು ಕನಸು ನುಚ್ಚುನೂರಾಗಿದೆ ಎಂದರು.

ಕಾಮನ್ವೆಲ್ತ್ ಕ್ರೀಡಾಕೂಟ, ಸ್ಪೆಕ್ಟ್ರಂ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಯುಪಿಎ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದ ಎಚ್.ಡಿ.ಕುಮಾರಸ್ವಾಮಿ ಧ್ವನಿ ಎತ್ತದಿರುವುದನ್ನು ಗಮನಿಸಿದರೆ ಎಲ್ಲೋ ಒಳಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಅನುಮಾನ ಕಾಡುತ್ತಿದೆ ಎಂದರು.

ಕೆಐಎಡಿಬಿ ಕಾನೂನು ಚೌಕಟ್ಟಿನಲ್ಲೇ ಸಂಸದ ರಾಘವೇಂದ್ರ ಅವರಿಗೆ ನಿವೇಶನ ನೀಡಲಾಗಿದೆ. ವಿನಾಕಾರಣ ಆರೋಪಿಸಿ ಜನತೆಯನ್ನು ವಂಚಿಸಲು ಸಾಧ್ಯವಿಲ್ಲ ಎಂಬುದನ್ನು ಇನ್ನಾದರೂ ಎಚ್.ಡಿ.ಕುಮಾರಸ್ವಾಮಿ ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ನ್ಯಾಯಾಂಗ ತನಿಖೆಯಿಂದ ಭೂಗಳ್ಳರು ಯಾರು ಎಂಬ ಸತ್ಯ ಹೊರ ಬೀಳಲಿದೆ. ಹಾಗೆಂದು ಲೋಕಾಯುಕ್ತರ ಬಗ್ಗೆ ನಂಬಿಕೆ ಅಥವಾ ಗೌರವವಿಲ್ಲ ಎಂದು ಭಾವಿಸಬೇಕಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ