ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಸೋಲಿಸಲು ಸಹಕಾರ ನೀಡುವವರಿಗೆ ಬೆಂಬಲ:ಸುಧಾಕರ್ (BJP | Sudhakar | Congress | JDS | Kodanda ramayya)
Bookmark and Share Feedback Print
 
ಚಳ್ಳಕೆರೆಯಲ್ಲಿ ಬಿಜೆಪಿ ಸೋಲಿಸಲು ಸಹಕಾರ ನೀಡುವವರಿಗೆ ನನ್ನ ಬೆಂಬಲ ಎಂದು ಮಾಜಿ ಸಚಿವ ಡಿ. ಸುಧಾಕರ್ ಬಹಿರಂಗವಾಗಿ ಘೋಷಿಸುವ ಮೂಲಕ ಸೆಡ್ಡು ಹೊಡೆದಿದ್ದಾರೆ.

ಪಟ್ಟಣದ ಶಾಂತಕುಮಾರ್ ಮೆಮೋರಿಯಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಸುಧಾಕರ್ ಅಭಿಮಾನಿಗಳ ಬಳಗದ ಸಭೆಯಲ್ಲಿ ಅವರುಮಾತನಾಡಿದರು.

ರಾಜ್ಯದಲ್ಲೂ ಬಿಜೆಪಿ ಸರಕಾರವಿದೆ. ಚಳ್ಳಕೆರೆ ಕ್ಷೇತ್ರದಲ್ಲೂ ಬಿಜೆಪಿ ಶಾಸಕರೇ ಇದ್ದಾರೆ. ಆದರೂ ಅಭಿವೃದ್ಧಿ ಕಾರ್ಯಗಳಲ್ಲಿ ಹಿನ್ನಡೆ ಆಗಿದೆ ಯಾಕೆ ? ಇದು ನನಗೆ ತೀವ್ರ ನೋವುಂಟು ಮಾಡಿದೆ. ಹಾಗಾಗಿ ಕ್ಷೇತ್ರದ ಪ್ರಗತಿಗೆ ದುಡಿಯುವ ಜನಪ್ರತಿನಿಧಿಗಳ ಆಯ್ಕೆಗೆ ತನ್ನ ಆದ್ಯತೆ ಇದೆ. ನನ್ನ ಚಿಂತನೆಗೆ ಬೆಂಬಲ ನೀಡುವವರಿಗೆ ಬೆಂಗಾವಲಾಗಿರುತ್ತೇನೆ. ಈ ಮೂಲಕ ಭ್ರಷ್ಟ ಬಿಜೆಪಿಯನ್ನು ಸೋಲಿಸುವುದಕ್ಕೆ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿದ್ದ ಬಹುತೇಕ ಕಾರ್ಯಕರ್ತರು, 'ನೀವು ಕಾಂಗ್ರೆಸ್‌ನಲ್ಲಿಯೇ ಇರಬೇಕು' ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸುಧಾಕರ್, ಕಾಂಗ್ರೆಸ್‌ನಲ್ಲಿ ಅರ್ಹರಿಗೆ ಪ್ರಾಶಸ್ತ್ಯ ಸಿಗುತ್ತಿಲ್ಲ. ಇದು ಆ ಪಕ್ಷದ ಹಿನ್ನಡೆಗೆ ಕಾರಣವಾಗಿದೆ. ಇದೇ ಕಾರಣಕ್ಕೆ ನಾನು ಪಕ್ಷೇತರನಾಗಿ ಕಣಕ್ಕಿಳಿಯಬೇಕಾಯಿತು ಎಂದು ಸ್ಪಷ್ಟನೆ ನೀಡಿದರು.

ಕಾಂಗ್ರೆಸ್ ಮುಖಂಡ ಕೋದಂಡರಾಮಯ್ಯ ತಮ್ಮ ಸಭೆಗೆ ಕಾಂಗ್ರೆಸಿಗರು ಹಾಜರಾಗಬಾರದು ಎಂದು ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕೋದಂಡರಾಮಯ್ಯ ಸ್ವಯಂ ಘೋಷಿತ ನಾಯಕರಂತೆ ವರ್ತಿಸುತ್ತಿದ್ದಾರೆ. ಆದರೆ ಚುನಾವಣೆಯಲ್ಲಿ ಮತದಾರ ಸೂಕ್ತ ಉತ್ತರ ನೀಡಿದ್ದಾರೆ. ಈಗಲೂ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ಕಾಂಗ್ರೆಸ್ ಗೆಲ್ಲಿಸಿದ್ದೆ ಆದಲ್ಲಿ ಅವರಿಗೆ ತಲೆ ಬಾಗುವೆ ಎಂದು ಸವಾಲು ಹಾಕಿದರು.
ಸಂಬಂಧಿತ ಮಾಹಿತಿ ಹುಡುಕಿ