ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹೈಕಮಾಂಡ್ ಆಶೀರ್ವಾದ;ಎಲ್ಲಾ ಅಗ್ನಿಪರೀಕ್ಷೆ ಎದುರಿಸುವೆ: ಸಿಎಂ (BJP | Yeddyurappa | Congress | Nithin gadkari | JDS)
Bookmark and Share Feedback Print
 
ಕಳೆದ ಎರಡೂವರೆ ವರ್ಷಗಳಿಂದ ಸತತವಾಗಿ ಅಗ್ನಿ ಪರೀಕ್ಷೆಗಳನ್ನು ಎದುರಿಸುತ್ತಲೇ ಬರುತ್ತಿದ್ದೇನೆ. ದೇವರು, ಸ್ವಾಮೀಜಿಗಳ ಹಾಗೂ ಹೈಕಮಾಂಡ್ ಆಶೀರ್ವಾದ ಬಲ ಇರುವುದರಿಂದ ಈ ಎಲ್ಲಾ ಅಗ್ನಿ ಪರೀಕ್ಷೆಗಳನ್ನು ಸಮುರ್ಥವಾಗಿ ಎದುರಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮುಂದಿನ ಎರಡೂವರೆ ವರ್ಷಗಳಲ್ಲಿ ಎದುರಾಗುವ ಇನ್ನೂ ಹತ್ತು ಹಲವಾರು ಅಗ್ನಿಪರೀಕ್ಷೆಗಳನ್ನು ಎದುರಿಸಿ ಗೆಲ್ಲುವ ವಿಶ್ವಾಸ ನನ್ನಲ್ಲಿದೆ. ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇನೆ. ಮುಂದಿನ ಅವಧಿಯಲ್ಲಿ ಮಾದರಿ ರಾಜ್ಯವನ್ನು ಕಟ್ಟುತ್ತೇನೆ ಎಂದು ಹೇಳಿದ್ದಾರೆ.

ನಗರದ ಸ್ವಾತಂತ್ರ್ಯಯೋಧ ಉದ್ಯಾನವನದ ಆವರಣದಲ್ಲಿ ನಡೆದ ಜೈನ ಆಚಾರ್ಯರಾಗಿ ಶ್ರೀಅರವಿಂದ ಸಾಗರ್ ಜೀ ಮಹಾರಾಜ್ ಸನ್ಯಾಸ ಸ್ವೀಕಾರ ಕಾರ್ಯಕ್ರಮದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನರ ನಿರೀಕ್ಷೆಗೆ ತಕ್ಕಂತೆ ಚುನಾವಣಾ ಪ್ರಣಾಳಿಕೆಯು ಸಿದ್ದಗೊಂಡಿದ್ದು, ಆದಷ್ಟು ಬೇಗ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಕೆಲವರ ವಿರೋಧದ ನಡುವೆಯೂ ಗೋಹತ್ಯೆಯನ್ನು ನಿಷೇಧ ಮಾಡುವ ನಿರ್ಧಾರವನ್ನು ಕೈಗೊಂಡಿದ್ದೇನೆ. ಸದ್ಯದಲ್ಲೇ ಸಂಸ್ಕೃತ ವಿವಿ ಆರಂಭಿಸುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ