ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮಂಗಳೂರು ವಿಮಾನ ದುರಂತ; 6 ತಿಂಗಳಾದ್ರೂ ಪರಿಹಾರ ಸಿಕ್ಕಿಲ್ಲ! (Mangalore | Accident | Air India | Kerala | High court)
Bookmark and Share Feedback Print
 
PTI
ಮಂಗಳೂರು ವಿಮಾನ ದುರಂತ ಸಂಭವಿಸಿ ಆರು ತಿಂಗಳು ಕಳೆದರೂ ಕೂಡ ದುರಂತದಲ್ಲಿ ಮಡಿದವರ ಕುಟುಂಬ ಮಾತ್ರ ಪರಿಹಾರದ ಹಣಕ್ಕಾಗಿ ಇನ್ನೂ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಈ ಭೀಕರ ದುರ್ಘಟನೆಯಲ್ಲಿ ಸಾವನ್ನಪ್ಪಿದ 158 ಮಂದಿಯಲ್ಲಿ 140 ಜನರಿಗೆ ಇನ್ನೂ ಪರಿಹಾರ ದೊರೆತಿಲ್ಲ ಎಂದು ಏರ್ ಇಂಡಿಯಾ ಮೂಲಗಳು ತಿಳಿಸಿವೆ.

ಘಟನೆ ನಡೆದು ಕೆಲವೇ ದಿನಗಳಲ್ಲಿ ಮೃತರ ಕುಟುಂಬದ ವಿವರ ಕಲೆಹಾಕಿ ಶೀಘ್ರವೇ ಪರಿಹಾರ ವಿತರಿಸುವುದಾಗಿ ಹೇಳಿದ್ದ ಏರ್ ಇಂಡಿಯಾ ಸಂಸ್ಥೆ ಇದೀಗ ಆರು ತಿಂಗಳು ಕಳೆದರೂ ಪರಿಹಾರ ನೀಡದಿರುವ ಬಗ್ಗೆ ಕುಟುಂಬಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ ನವೆಂಬರ್ 2010ರವರೆಗೆ ಕೇವಲ 18 ಕುಟುಂಬಗಳಿಗಷ್ಟೇ ಪರಿಹಾರ ನೀಡಲಾಗಿದೆ ಎಂದು ಏರ್ ಇಂಡಿಯಾ ಕೇರಳ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ. ಅಲ್ಲದೇ ಘಟನೆಯಲ್ಲಿ ಸಾವನ್ನಪ್ಪಿದವರೊಬ್ಬರ ಹೆತ್ತವರು ಕೇರಳ ಹೈಕೋರ್ಟ್‌ನಲ್ಲಿ ದೂರು ದಾಖಲಿಸಿದ್ದು, 75 ಲಕ್ಷ ರೂ.ಪರಿಹಾರವನ್ನು ತಕ್ಷಣವೇ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ