ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೌಡ್ರ ಮಾರ್ಗದರ್ಶನ ಇದ್ರೂ ರಾಜಕಾರಣ ಕಲಿಯಲಾಗಿಲ್ಲ: ಸೋಮಣ್ಣ (Deve gowda | Somanna | JDS | BJP | North karnataka)
Bookmark and Share Feedback Print
 
ಉತ್ತರ ಕರ್ನಾಟಕ ಭಾಗದ ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾರ್ಚ್ ಅಂತ್ಯದೊಳಗೆ ಸಂತ್ರಸ್ತರಿಗೆ ಮನೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಭರವಸೆ ಹುಸಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು ಎಂದರು.

ಮುಖ್ಯಮಂತ್ರಿ ಅವರು ಖಾತೆ ಯಾಕೆ ಬದಲಾಯಿಸಿದ್ದಾರೊ ಗೊತ್ತಿಲ್ಲ. ಬದಲಾವಣೆ ಅವರ ಪರಮಾಧಿಕಾರ. ಅವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದು ನನ್ನ ಕೆಲಸ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅನುಮಾನದ ಸುಳಿಯಲ್ಲಿ ಸಿಲುಕಿದ್ದಾರೆ. ಗೌಡರು, ಕುಮಾರಸ್ವಾಮಿ, ರೇವಣ್ಣ ಜತೆಯಲ್ಲಿ ಅವರ ನಡೆ ಅನುಮಾನಾಸ್ಪದವಾಗಿದೆ. ಇತ್ತೀಚೆಗೆ ಸುಳ್ಳು ಹೇಳುವುದನ್ನು ಜಾಸ್ತಿ ಮಾಡಿದ್ದಾರೆ. ಎಲ್ಲಿಯೋ ಏನೇನೊ ನಡೆಯುತ್ತಿದೆ ಎನ್ನುವ ಅನುಮಾನ ಬರುತ್ತಿದೆ ಎಂದು ಈ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾನು ಜೆಡಿಎಸ್ ವರಿಷ್ಠ ದೇವೇಗೌಡರ ಮಾರ್ಗದರ್ಶನದಲ್ಲಿ ಬೆಳೆದರೂ, ಶೇ. 1ರಷ್ಟು ರಾಜಕಾರಣ ಕಲಿಯಲು ಸಾಧ್ಯವಾಗಿಲ್ಲ. ಅವರ ಬಗ್ಗೆ ಟೀಕಿಸುವುದಿಲ್ಲ. ಆದರೆ, ನಾನು ಹೊಟ್ಟೆಪಾಡಿಗಾಗಿ ರಾಜಕಾರಣಕ್ಕೆ ಬಂದಿಲ್ಲ ಎನ್ನುವುದನ್ನು ಟೀಕಾಕಾರರು ಅರಿತುಕೊಳ್ಳಲಿ ಎಂದು ತಿರುಗೇಟು ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ