ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಾಕತ್ತಿದ್ರೆ ನಮ್ಮನ್ನು ವಜಾ ಮಾಡಿ: ಸಿಎಂಗೆ ಬೇಳೂರು (Beluru | Shivmoga | Yeddyurappa | BJP | JDS | Ishwarappa)
Bookmark and Share Feedback Print
 
ಅಧಿಕಾರ ದುರ್ಬಳಕೆ ಮಾಡಿಕೊಂಡು ಶಾಸಕ ಸ್ಥಾನದಿಂದ ವಜಾ ಮಾಡಲು ಪ್ರಯತ್ನಿಸಿದ ನಿಮಗೆ ತಾಕತ್ತಿದ್ದರೆ ನಮ್ಮನ್ನು ಪಕ್ಷದಿಂದ ಹೊರಗೆ ಹಾಕಿ ಎಂದು ಬೇಳೂರು ಗೋಪಾಲಕೃಷ್ಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಸವಾಲು ಹಾಕಿದ್ದಾರೆ.

ಅನರ್ಹಗೊಂಡ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ತಪ್ಪು ಮಾಡದ ನಮ್ಮನ್ನು ಅನರ್ಹಗೊಳಿಸಲಾಯಿತು. ಈಗ ನಾವು 17 ಜನ ಸೇರಿ ಬೇರೆ, ಬೇರೆ ಪಕ್ಷಗಳನ್ನು ಗೆಲ್ಲಿಸುವ ಮೂಲಕ ನಮ್ಮ ನೋವನ್ನು ಮರೆಯಲು ಹೊರಟಿದ್ದೇವೆ ಎಂದರು.

ಶಾಸಕತ್ವ ಅನರ್ಹತೆ ವಿಚಾರ ಸುಪ್ರೀಂಕೋರ್ಟ್‌ ಕಟಕಟೆಯಲ್ಲಿ ಇರುವುದರಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಹಿರಂಗವಾಗಿ ಯಾವುದೇ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಲು ಸಾಧ್ಯವಿಲ್ಲ. ಆದರೆ ಗೌಪ್ಯವಾಗಿ ಪಕ್ಷವೊಂದಕ್ಕೆ ತಮ್ಮ ಬೆಂಬಲ ಇದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ