ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಖ್ಯಮಂತ್ರಿಯನ್ನು ಪ್ರಶ್ನಿಸಿದ ರೈತನ ಬಂಧನ (CM| Arrest| AGRICULTURIST)
Bookmark and Share Feedback Print
 
NRB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಪ್ರಶ್ನಿಸಿದ ರೈತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ರೈತರ ವಿರುದ್ಧ ಹೂಡಲಾದ ಮೂಕದ್ದಮೆಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಜೋರಾಗಿ ಕೂಗಿ ಹೇಳಿದ ರೈತನನ್ನು ಪೊಲೀಸರು ಬಂಧಿಸಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಪ್ರಚಾರಕ್ಕೆ ಗರಗ ಗ್ರಾಮಕ್ಕೆ ಮುಖ್ಯಮಂತ್ರಿ ಭೇಟಿ ನೀಡಿದಾಗ, ರೈತನ ಗೋಳನ್ನು ಕೇಳಿದ ಮುಖ್ಯಮಂತ್ರಿಗಳು ಭಾಷಣಕ್ಕೆ ಅಡ್ಡಿ ಮಾಡುತ್ತಿಯಾ ಆತನನ್ನು ಹೊರಹಾಕಿ ಎಂದು ಪೊಲೀಸರಿಗೆ ಆದೇಶಿಸಿದರು.

ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿ, ಸ್ವಯಂ ದೂರು ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಲಾಯಿತು ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮುಖ್ಯಮಂತ್ರಿ ರೈತ, ಬಂಧನ