ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೇಂದ್ರದಲ್ಲಿ ಮಂತ್ರಿಯಾಗಲು ಗವರ್ನರ್ ಡ್ರಾಮಾ:ಈಶ್ವರಪ್ಪ (Ishwarappa | UPA | Congress | Bharadwaj | Rahul gandhi)
Bookmark and Share Feedback Print
 
NRB
ಕೇಂದ್ರದಲ್ಲಿ ಮಂತ್ರಿಸ್ಥಾನ ಗಿಟ್ಟಿಸಿಕೊಳ್ಳಲು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಡ್ರಾಮಾ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷೆ ಕೆ.ಎಸ್.ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಪಾಲರು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜತೆ ನಿಕಟ ಸಂಪರ್ಕ ಹೊಂದಿದ್ದಾರೆ. ಹಾಗಾಗಿ ಏನಾದರೂ ಮಾಡಿ ಕೇಂದ್ರದಲ್ಲಿ ಮಂತ್ರಿಸ್ಥಾನ ಗಿಟ್ಟಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಅನಾವಶ್ಯಕವಾಗಿ ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸುವುದು ರಾಜ್ಯಪಾಲರ ಘನತೆಗೆ ತಕ್ಕುದಲ್ಲ. ಅವರು ಘನತೆಗೆ ತಕ್ಕಂತೆ ವರ್ತಿಸಲಿ ಎಂದು ಈಶ್ವರಪ್ಪ ಈ ಸಂದರ್ಭದಲ್ಲಿ ಸಲಹೆ ನೀಡಿದರು.

ಗವರ್ನರ್ ರಾಜಕಾರಣ ಮಾಡುವುದಿದ್ದರೆ ಮಾಡಲಿ ಆದರೆ ರಾಜ್ಯ ಸರಕಾರದ ಮೇಲೆ ಸದಾ ಗೂಬೆ ಕೂರಿಸುವ ಕೆಲಸ ಮಾಡುವುದು ಬೇಡ. ಅಷ್ಟೇ ಅಲ್ಲ ರಾಜ್ಯಪಾಲರು ಕೂಡ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಗಳು ಕೇಳಿಬರುತ್ತಿವೆಯಲ್ಲ ಅದಕ್ಕೆ ಏನೆನ್ನಬೇಕು ಎಂದು ಈ ಸಂದರ್ಭದಲ್ಲಿ ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ