ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಕುಟುಂಬ ಬ್ರಹ್ಮ, ವಿಷ್ಣು, ಮಹೇಶ್ವರರಿದ್ದಂತೆ: ಕುಮಾರಸ್ವಾಮಿ (Kumaraswamy | BJP | JDS | Nithin gadkari | Yeddyurappa)
Bookmark and Share Feedback Print
 
ಕೇಂದ್ರದಲ್ಲಿ ಕಾಂಗ್ರೆಸ್ ಮುಖಂಡರು ದೇಶವನ್ನು ಲೂಟಿ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಉಜಿರೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಕುಟುಂಬದ ಅಭಿವೃದ್ಧಿ ಮಾಡುತ್ತಿದ್ದಾರೆ. ಅವರ ಪುತ್ರರು, ಅಳಿಯ ಬ್ರಹ್ಮ- ವಿಷ್ಣು-ಮಹೇಶ್ವರರಾಗಿದ್ದು, ಆಡಳಿತವನ್ನು ನಿಯಂತ್ರಿಸುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಮುಖ್ಯಮಂತ್ರಿಯವರ ಹಗರಣಗಳು ಅಕ್ರಮವಲ್ಲ, ಅನೈತಿಕ ಎಂಬ ಸರ್ಟಿಫಿಕೇಟ್ ನೀಡಿದ್ದಾರೆ. ಹಿಂದೂ ಧರ್ಮದಲ್ಲಿ ಅನೈತಿಕ ಎಂಬ ಪದದ ಅರ್ಥವೇನು ಎಂಬುದನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಯಾವ ನೈತಿಕತೆಯಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ಇದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಭಾಗ್ಯಲಕ್ಷ್ಮಿ ಯೋಜನೆಯನ್ನು ತನ್ನ ಅಧಿಕಾರವಧಿಯಲ್ಲಿ ಆರಂಭಿಸಲಾಗಿದ್ದು, ಇದೀಗ ಸಿಎಂ ತಾನೇ ಆರಂಭಿಸಿದಂತೆ ಪೋಸ್ ನೀಡುತ್ತಿದ್ದಾರೆ. ಸೀರೆ ವಿತರಣೆಯಲ್ಲಿ ಸುಮಾರು 12 ಲಕ್ಷ ರೂ. ಲೂಟಿ ಮಾಡಿದ್ದಾರೆ. ಸರಕಾರದ ಹಣದಲ್ಲಿ ವಿತರಣೆ ಮಾಡಿದ್ದಾರೆ. ಬಿಜೆಪಿ ದತ್ತಪೀಠದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಮಾಲೆ ಹಾಕಿ ಜನರನ್ನು ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ