ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಖ್ಯಮಂತ್ರಿ ಯಡಿಯೂರಪ್ಪ ಹಾಜರಿದ್ದ ವೇದಿಕೆಗೆ ಕಲ್ಲು ತೂರಾಟ (BJP | Yeddyurappa | Somanna | Congress | JDS | Election)
Bookmark and Share Feedback Print
 
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಎರಡನೇ ಹಂತದ ಚುನಾವಣೆ ಅಖಾಡ ರಂಗೇರುತ್ತಿರುವ ನಡುವೆಯೇ ಬಾಣಾವರದಲ್ಲಿ ಸೋಮವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿದ್ದ ಪ್ರಚಾರ ಸಭೆಯ ವೇದಿಕೆಯತ್ತ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಕಡೂರು ತಾಲೂಕು ಸಮೀಪದ ಬಾಣಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಪಕ್ಕ ಸಭೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ತೂರಿದ ಕಲ್ಲೊಂದು ವೇದಿಕೆಯ ಮುಂಭಾಗ ಬಿತ್ತು, ಕೂಡಲೇ ಭಾಷಣ ನಿಲ್ಲಿಸಿದ ಸೋಮಣ್ಣ ಕಲ್ಲನ್ನು ಹಿಡಿದುಕೊಂಡು, ಇದು ವಿಪಕ್ಷದವರ ಕೃತ್ಯ ಎಂದು ವಾಗ್ದಾಳಿ ನಡೆಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿಗಳು, ಬಿಜೆಪಿ ಏಳಿಗೆಯನ್ನು ಸಹಿಸದೇ ವಿಪಕ್ಷಗಳು ಇಂತಹ ನೀಚ ಕೃತ್ಯಕ್ಕೆ ಇಳಿದಿವೆ ಎಂದು ಆರೋಪಿಸಿದರು. ಬಿಜೆಪಿ ಅಭಿವೃದ್ದಿಗೆ ಅಡ್ಡಗಾಲು ಹಾಕುತ್ತಿರುವ ವಿಪಕ್ಷಗಳಿಗೆ ಜನರೇ ತಕ್ಕ ಪಾಠ ಕಲಿಸಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ