ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಮತ್ತು ಜೆಡಿಎಸ್ ಧೂಳಿಪಟವಾಗಿವೆ: ಶೆಟ್ಟರ್ (Congress | JDS | Jagadish Shettar | Hubballi | Yeddyurappa)
Bookmark and Share Feedback Print
 
ರಾಜ್ಯಾದ್ಯಂತ ನಡೆದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಧೂಳಿಪಟವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ ಶೆಟ್ಟರ್ ಟೀಕಿಸಿದ್ದಾರೆ.

ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಯಲ್ಲಿ ಹು-ಧಾ ಮಹಾನಗರ ಮತ್ತು ಗ್ರಾಮೀಣ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಪ್ರತಿಪಕ್ಷಗಳು ವಿನಾಕಾರಣ ಟೀಕೆ ಮಾಡುತ್ತಲೇ ಬಂದಿವೆ. ಇದಕ್ಕೆ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲ್ಲಿಸಿದ್ದಾರೆ. ರಚನಾತ್ಮಕ ಟೀಕೆ ಮಾಡುವುದು ಬಿಟ್ಟು ಸರಕಾರದ ವಿರುದ್ಧಕಾಟಾಚಾರಕ್ಕಾಗಿ ಸುಳ್ಳಿನ ಸರಮಾಲೆಗಳ ಆರೋಪ ಮಾಡಿದ್ದಾರೆ ಎಂದು ಟೀಕಿಸಿದರು.

ಹೊಸದಾಗಿ ಚುನಾಯಿತರಾದ ಜಿಪಂ ಮತ್ತು ತಾಪಂ ಸದಸ್ಯರಿಗೆ ಆಡಳಿತ ನಿರ್ವಹಣೆ ಬಗ್ಗೆ ತರಬೇತಿ ನೀಡಲು ಪಕ್ಷ ಚಿಂತನೆ ನಡೆಸಿದೆ. ಇದಲ್ಲದೇ ಮೈಸೂರಿನಲ್ಲಿರುವ ಅಬ್ದುಲ್ ನಜೀರ್‌ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕೇಂದ್ರವೊಂದನ್ನು ಉತ್ತರ ಕರ್ನಾಟಕ ಭಾಗದಲ್ಲಿ ಆರಂಭಿಸಲು ಸರಕಾರ ಮಟ್ಟದಲ್ಲಿ ಚಿಂತನೆ ನಡೆದಿದೆ. ಚುನಾಯಿತ ಪ್ರತಿಧಿನಿಧಿಗಳು ಮೈಸೂರಿಗೆ ತೆರಳಿ ತರಬೇತಿ ಪಡೆಯಲು ಕೆಲ ಸದಸ್ಯರಿಗೆ ಆಗುವುದಿಲ್ಲ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ