ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಜೆಟ್ ಮಂಡನೆ ಬಳಿಕ ಸಂಪುಟ ವಿಸ್ತರಣೆ: ಈಶ್ವರಪ್ಪ (Ishwarappa | State Budget | Yeddyurappa | BJP | Cabinet expand)
ಬಜೆಟ್ ಮಂಡನೆ ಬಳಿಕ ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಜಿಪಂ-ತಾಪಂ ಚುನಾವಣೆಯ ನಂತರ ಸಂಪುಟ ವಿಸ್ತರಣೆ ಮಾಡುವುದೆಂದು ನಿರ್ಧರಸಲಾಗಿತ್ತಾದರೂ ಕೆಲವು ಕಾರಣಗಳಿಂದ ಅದು ಸಾಧ್ಯವಾಗಿಲ್ಲ. ಇದೀಗ ಬಜೆಟ್ ಅಧಿವೇಶನ ಮುಕ್ತಾಯಗೊಂಡ ನಂತರ ಸಚಿವ ಸಂಪುಟದ ವಿಸ್ತರಣೆ ಜೊತೆಗೆ ನಿಗಮ, ಮಂಡಳಿಗಳಿಗೆ ಅಧ್ಯಕ್ಷರು -ಸದಸ್ಯರುಗಳನ್ನು ನೇಮಕ ಮಾಡಲಾಗುವುದೆಂದು ಅವರು ಹೇಳಿದರು.

ಬಜೆಟ್ ಅಧಿವೇಶನದ ವೇಳೆಯಲ್ಲಾದರೂ ವಿಪಕ್ಷಗಳು ಸುಗಮ ಕಲಾಪಕ್ಕೆ ಅವಕಾಶ ನೀಡಬೇಕು. ಜನರ ಸಮಸ್ಯೆಗಳ ಚರ್ಚೆಗೆ ಮುಂದಾಗ ಬೇಕು. ವಿನಾ ಕಾರಣ ಗೊಂದಲ ಸೃಷ್ಟಿಸುವ ಕಾರ್ಯವನ್ನು ಕೈ ಬಿಡಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಇವನ್ನೂ ಓದಿ