ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನನ್ನ ಕ್ಷೇತ್ರದಲ್ಲಿ ಯಡಿಯೂರಪ್ಪ ಗಿಮಿಕ್ ನಡೆಯಲ್ಲ: ಎಚ್‌ಡಿಕೆ (Kumaraswamy | JDS | BJP | Yeddyurapap | Deve gowda | By poll)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಚಾಣ, ಗಿಮಿಕ್ ಈ ಉಪ ಚುನಾವಣೆಯಲ್ಲಿ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಲೂಕಿನ ಕಳ್ಳಿಹೊಸೂರು ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಂ.ಲಿಂ.ನಾಗರಾಜು ಪರ ಚುನಾವಣಾ ಪ್ರಚಾರ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರಕಾರದ ಹಣ, ಆಮಿಷಗಳಿಗೆ ಈ ಕ್ಷೇತ್ರದ ಮತದಾರ ಬಲಿಯಾಗುವುದಿಲ್ಲ ಎಂದು ಹೇಳಿದರು.

ಇಡೀ ಸರಕಾರವೇ ನಿಂತು, ಖುದ್ದು ಮುಖ್ಯಮಂತ್ರಿ ಹತ್ತು ದಿನಗಳ ಕಾಲ ಪ್ರವಾಸ ಮಾಡಿದರೂ ಗುಲ್ಬರ್ಗ ಉಪ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಎಂತಹವರು ಎಂಬುದನ್ನು ಸಾಬೀತು ಮಾಡಿದ್ದಾರೆ. ಇನ್ನು ನಮ್ಮ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಈ ಕ್ಷೇತ್ರದ ಮತದಾರರು ನನ್ನ ಮತ್ತು ನನ್ನ ತಂದೆಯವರ ರಾಜಕೀಯ ಮೆಟ್ಟಿಲುಗಳಿಗೆ ಉತ್ತಮವಾಗಿ ಸ್ಪಂದಿಸಿರುವವರು ಈ ಜನ. ನಮ್ಮ ಪಕ್ಷವನ್ನು ಕೈಬಿಡುವುದಿಲ್ಲ ಎಂಬ ಆಶಾಭಾವನೆ ನನ್ನಲ್ಲಿದೆ ಎಂದು ಕುಮಾರಸ್ವಾಮಿ ವಿಶ್ವಾಸವ್ಯಕ್ತಪಡಿಸಿದರು.
ಇವನ್ನೂ ಓದಿ