ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಯಡಿಯೂರಪ್ಪ ಜೈಲು ಸೇರುವುದು ಖಚಿತ: ವೆಂಕಟರಮಣಪ್ಪ (Chief minister , Venkatramanappa)
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಭ್ರಷ್ಟಾಚಾರವನ್ನು ಕಾಯಕವನ್ನಾಗಿಸಿಕೊಂಡ ಬಿ.ಎಸ್‌. ಯಡಿಯೂರಪ್ಪ ಮುಂದಿನ ದಿನಗಳಲ್ಲಿ ಕೃಷ್ಣನ ಜನ್ಮ ಸ್ಥಾನ ಸೇರುವುದು ಖಚಿತ ಎಂದು ಮಾಜಿ ಸಚಿವ ಅನರ್ಹ ಶಾಸಕ ಪಿ.ವೆಂಕಟರಮಣಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಸಾಕಷ್ಟು ಪ್ರಕರಣಗಳು ನ್ಯಾಯಾಲಯದಲ್ಲಿವೆ.ಭ್ರಷ್ಟಾಚಾರ ಸ್ವಜನ ಪಕ್ಷಪಾತ ಸೇರಿದಂತೆ ಹಲವು ಆರೋಪಗಳು ಸಾಬೀತಾಗುವ ಹಂತದಲ್ಲಿರುವುದರಿಂದ ಅವರಿಗೆ ಕೊನೆಗೆ ಜೈಲೇ ಗತಿ ಎಂದು ಕಿಡಿಕಾರಿದ್ದಾರೆ.

ಸದ್ಯಕ್ಕೆ ಹಲವು ಪ್ರಕರಣಗಳ ವಿಚಾರಣೆದೆ ತಡೆಯಾಗಿರಬಹುದು ಆದರೆ, ಅದು ಶಾಶ್ವತವಲ್ಲ ಎನ್ನುವುದು ಶೀಘ್ರದಲ್ಲಿ ಬಹಿರಂಗವಾಗಲಿದೆ ಎಂದರು.

ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿಯ ಪರವಾಗಿ ಪ್ರಚಾರಕ್ಕೆ ತೆರಳುವುದಾಗಿ ತಿಳಿಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯ ವೇಳೆಗೆ ಮುಖ್ಯಮಂತ್ರಿಗಳು ಜೈಲು ಸೇರುವುದು ಖಚಿತವಾಗಿದೆ ಎಂದು ಮಾಜಿ ಸಚಿವ ವೆಂಕಟರಮಣಪ್ಪ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇವನ್ನೂ ಓದಿ