ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಣ್ಣಾ ಹಜಾರೆ ಹೋರಾಟಕ್ಕೆ ಯಡಿಯೂರಪ್ಪ ಬೆಂಬಲ (Anna hazare | Yeddyurappa | Bangalore | BJP | Land scam)
WD
ಭ್ರಷ್ಟಾಚಾರದ ವಿರುದ್ಧ ಸಮರ ಸಾರಿ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ ಅವರ ಚಳವಳಿ ಬಗ್ಗೆ ಏನು ಹೇಳುತ್ತೀರಿ ಎಂಬ ಪ್ರಶ್ನೆಗೆ ನೋ ಕಮೆಂಟ್ ಎಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದೀಗ ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಜನಲೋಕಪಾಲ್ ಮಸೂದೆ ಜಾರಿಯಾಗಲೇಬೇಕು ಎಂದು ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಹಿಂದುಳಿದ ವರ್ಗದ ಅಭಿವೃದ್ಧಿಗೆ ಶ್ರಮಿಸಿದವರಿಗೆ ಸರಕಾರ ನೀಡುವ ದೇವರಾಜ ಅರಸ್ ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರಿಗ ಪ್ರದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಈ ಸಂದರ್ಭದಲ್ಲಿ ಹೆಗಡೆಯವರೂ ಕೂಡ ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುವುದಾಗಿ ಹೇಳಿದರು. ಹಲವಾರು ಭ್ರಷ್ಟಾಚಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಭ್ರಷ್ಟಾಚಾರ ವಿರೋಧಿ ಕಾನೂನನ್ನು ಜಾರಿಗೆ ತರಲು ತಕ್ಷಣ ಕ್ರಮಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.
ಇವನ್ನೂ ಓದಿ