ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಕ್ಕೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಭೇಟಿ (Rahul Gandhi | Congress | Youth Congress | Karnataka)
ಕಾಂಗ್ರೆಸ್ ಯುವ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ರಾಜ್ಯಕ್ಕೆ ಇಂದು (ಬುಧವಾರ) ಭೇಟಿ ನೀಡಲಿದ್ದು, ಯುವ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೂಲಕ ಹುಬ್ಬಳ್ಳಿಗೆ ಆಗಮಿಸಿರುವ ರಾಹುಲ್ ಗಾಂಧಿ ನಂತಹ ಹೆಲಿಕಾಪ್ಟರ್ ಮುಖಾತರ ವಿಜಾಪುರಕ್ಕೆ ತೆರಳಲಿದ್ದಾರೆ.

ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಂಭಾವ್ಯ ಅಭ್ಯರ್ಥಿಗಳ ಜತೆ ಸಂವಾದದಲ್ಲಿ ಎಐಸಿಸಿ ಪ್ರಧಾನ ಪ್ರಧಾನ ಕಾರ್ಯದರ್ಶಿ ಆಗಿರುವ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ಭೇಟಿ ಹಿನ್ನಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಬಿಗು ಬಂದೋಸ್ತ್ ಏರ್ಪಡಿಸಲಾಗಿದೆ. ಆದರೆ ಮಾಧ್ಯಮದವರನ್ನು ಸಂಪೂರ್ಣವಾಗಿ ದೂರವಿರಿಸಲಾಗಿದೆ. ಬೆಂಗಳೂರಿನ ಆಯ್ದ ಛಾಯಾಗ್ರಾಹಕರಿಗೆ ಮಾತ್ರ ಫೋಟೊ ಕ್ಲಿಕ್ಕಿಸಲು ಅವಕಾಶ ನೀಡಲಾಗಿದೆ.

ರಾಹುಲ್ ಗಾಂಧಿ ಭೇಟಿ ಹಿನ್ನಲೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿದೆ. ಕೆಪಿಸಿಸಿ ನೂತನ ಪಧಾಧಿಕಾರಿಗಳ ಆಯ್ಕೆ ಹಿನ್ನಲೆಯಲ್ಲಿ ರಾಹುಲ್ ಭೇಟಿ ಮಹತ್ವವನ್ನು ಗಿಟ್ಟಿಸಿದೆ.
ಇವನ್ನೂ ಓದಿ