ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾನು ರಾಜೀನಾಮೆ ಕೊಡಲ್ಲ: ಗವರ್ನರ್ ತಿರುಗೇಟು (Bharadwaj | Karnataka Crisis | BJP | Yeddyurappa | Congress)
ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲಾರೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಬಿಜೆಪಿ ಬೇಡಿಕೆಗೆ ಸ್ಪಷ್ಟವಾಗಿ ತಿರುಗೇಟು ನೀಡಿದ್ದಾರೆ.

ನನ್ನನ್ನು ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ. ಯಾರೋ ರಾಜೀನಾಮೆ ಕೇಳಿದರೆ ರಾಜೀನಾಮೆ ನೀಡಲಾರೆ. ನನ್ನನ್ನು ವಾಪಸು ಕರೆಸಿಕೊಳ್ಳುವುದು ಅಥವಾ ಬಿಡುವುದು ರಾಷ್ಟ್ರಪತಿಗೆ ಸಂಬಂಧಿಸಿದ ವಿಚಾರ ಎಂದರು.

ಕರ್ನಾಟಕ ಲೋಕಸೇವಾ ಆಯೋಗದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸಿರುವ ತೃಪ್ತಿ ನನಗಿದೆ. ನನಗೆ ಶತ್ರುಗಳಿಲ್ಲ, ಮಿತ್ರರೂ ಇಲ್ಲ. ಸಂವಿಧಾನಕ್ಕೆ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ನ್ಯಾಯಾಂಗದ ಆದೇಶದಂತೆ ಅಧಿಕಾರ ಚಲಾಯಿಸಿರುವೆ, ನ್ಯಾಯಾಲಯ ನೀಡಿರುವ ತೀರ್ಪನ್ನು ಪರಿಪಾಲಿಸಿರುವೆ ಎಂದು ಹೇಳಿದರು.

ನಾನು ಕರ್ನಾಟಕದ ಅತಿಥಿ, ನಮ್ಮ ಸಂಸ್ಕೃತಿಯಲ್ಲಿ ಮಾತೃದೇವೋಭವ, ಪಿತೃದೇವೋಭವ ಎಂದು ಹೇಳುತ್ತೇವೆ. ಅದೇ ರೀತಿ ಅತಿಥಿದೇವೋಭವ ಕೂಡ ಎಂದು ಮಾರ್ಮಿಕವಾಗಿ ನುಡಿದರು.
ಇವನ್ನೂ ಓದಿ