ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭ್ರಷ್ಟಾಚಾರ ವಿರುದ್ಧದ ಹೋರಾಟ ನಿರಂತರ: ಸಂತೋಷ್ ಹೆಗ್ಡೆ (Yokayuktha | Santhosh Hegde | Illegal Mining | Yaddyurappa)
ಲೋಕಾಯುಕ್ತರಾಗಿ ಭ್ರಷ್ಟಾಚಾರ ವಿರುದ್ಧ ತೀವ್ರ ಹೋರಾಟವನ್ನೇ ಕೈಗೊಂಡಿದ್ದ ದಕ್ಷ ಪ್ರಾಮಾಣಿಕ ಅಧಿಕಾರಿ ನ್ಯಾಯವಾದಿ ಸಂತೋಷ್ ಹೆಗ್ಡೆ ಇಂದು (ಆಗಸ್ಟ್ 2) ಸೇವೆಯಿಂದ ನಿವೃತ್ತಿಯಾಗಲಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

2006ರಲ್ಲಿ ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿ ಕಾಡಿದ್ದ ಸಂತೋಷ್ ಹೆಗ್ಡೆ, ರಾಜ್ಯದ ಜನತೆಯಲ್ಲಿ ಭಾರಿ ಜನಪ್ರಿಯತೆಯನ್ನೇ ಗಳಿಸಿದ್ದರು.

ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಕುರ್ಚಿಯಿಂದ ಬಿ. ಎಸ್. ಯಡಿಯೂರಪ್ಪ ಅವರನ್ನು ಕೆಳಗೆಳಿಸಿದ ಲೋಕಾಯುಕ್ತರು ಭ್ರಷ್ಟಚಾರದ ವಿರುದ್ಧ ಸಮರವನ್ನೇ ಸಾರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕಾಯುಕ್ತ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿರುವುದು ತನಗೆ ಅತೀವ ತೃಪ್ತಿ ತಂದಿದ್ದು, ಸಂತೋಷದಿಂದಲೇ ನಿವೃತ್ತಿಯಾಗುತ್ತಿದ್ದೇನೆ ಎಂದಿದ್ದಾರೆ.

ಲೋಕಾಯುಕ್ತ ಹುದ್ದೆಯಿಂದ ನಿವೃತ್ತಿ ಹೊಂದಿದ ಬಳಿಕ ಜನ ಸಾಮಾನ್ಯರೊಂದಿಗೆ ಸೇರಿ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡಲಿದ್ದೇನೆ. ಭ್ರಷ್ಟಾಚಾರ ವಿರುದ್ಧದ ತನ್ನ ಹೋರಾಟ ನಿರಂತರ ಎಂದು ಹೇಳಿದ ಅವರು ಜನ ಲೋಕಪಾಲ್ ಕರಡು ಸಮಿತಿಯ ಸದಸ್ಯನಾಗಿ ನಾಗರಿಕ ಸಮಿತಿಯ ಅಣ್ಣಾ ಹಜಾರೆಯವರೊಂದಗೆ ಕೆಲಸ ಮಾಡುವುದಾಗಿ ತಿಳಿಸಿದರು.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಲೋಕಾಯುಕ್ತ, ಸಂತೋಷ್ ಹೆಗ್ಡೆ, ಕರ್ನಾಟಕ, ಅಕ್ರಮ ಗಣಿಗಾರಿಕೆ, ಯಡಿಯೂರಪ್ಪ