ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಜಾರೆ ಚಳುವಳಿಗೆ ಸಂಪೂರ್ಣ ಬೆಂಬಲ: ಸಂತೋಷ್ ಹೆಗ್ಡೆ (Anna Hazare | Santosh Hegde | Lokpal Bill | Karnataka)
ಸಂಸತ್ತಿನಲ್ಲಿ ಮಂಡಿಸಲಾಗಿರುವ ಜನಲೋಕಪಾಲ ಮಸೂದೆಯು ಜನವಿರೋಧಿಯಾಗಿದೆ ಎಂದು ಆಪಾದಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಗಸ್ಟ್ 16ರಿಂದ ಕೈಗೊಳ್ಳುವ ನಿರಶನ ಸತ್ಯಾಗ್ರಹಕ್ಕೆ ತಮ್ಮ ಸಂಪೂರ್ಣ ಬೆಂಬಲ ನೀಡುವುದಾಗಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಜನಲೋಕಪಾಲ ಮಸೂದೆ ಕರಡು ರಚನೆಗಾಗಿ ರಚಿಸಲಾದ 'ನಾಗರಿಕ ಸಮಿತಿ'ಯ ಸದಸ್ಯರೂ ಆಗಿರುವ ಹೆಗ್ಡೆ ಅವರು ಈ ಹಿಂದೆಯೇ ಭ್ರಷ್ಟಾಚಾರ ವಿರುದ್ಧದ ತಮ್ಮ ಹೋರಾಟ ನಿರಂತರ ಎಂದು ಸಾರಿದ್ದರು.

ಅಣ್ಣಾ ಹಜಾರೆ ನೇತೃತ್ವದಲ್ಲಿ ಆಗಸ್ಟ್ 16ರಂದು ದೇಶದ್ಯಾಂತ ಧರಣಿ ಸತ್ಯಾಗ್ರಹ ನಡೆಯಲಿದೆ. ಅಂದೇ ಬೆಂಗಳೂರಿನಲ್ಲೂ ಇಂಡಿಯಾ ಎಂಗೈಸ್ಟ್ ಕರಪ್ಷನ್ (ಐಎಸಿ) ಸಂಘಟನೆಯ ನೇತೃತ್ವದಲ್ಲಿ ಧರಣಿ ನಡೆಯಲಿದೆ. ಆದರೆ ಅಂದು ನಾನು ನಗರದಲ್ಲಿರುವುದಿಲ್ಲ. ಹೀಗಾಗಿ 17ರಂದು ಹೋರಾಟಕ್ಕೆ ಕೈಜೋಡಿಸಲಿದ್ದೇನೆ ಎಂದಿದ್ದಾರೆ.

ತಮ್ಮ ಅಧಿಕಾರವಧಿಯಲ್ಲಿ ಭ್ರಷ್ಟಾಚಾರ ವಿರುದ್ಧ ಸಮರವನ್ನೇ ಸಾರಿದ್ದ ಹೆಗ್ಡೆ ಅವರು, ಅಕ್ರಮ ಗಣಿಗಾರಿಕೆ ವಿರುದ್ಧ ವರದಿ ಸಲ್ಲಿಸುವ ಮೂಲಕ ಇಡೀ ರಾಜಕೀಯ ವಲಯದಲ್ಲೇ ಸಂಚಲನ ಮೂಡಿಸಿದ್ದರು. ಇದರಂತೆ ಮಾಜಿ ಸಿಎಂ ಬಿ. ಎಸ್. ಯೂಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿತ್ತು.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಣ್ಣಾ ಹಜಾರೆ, ಸಂತೋಷ್ ಹೆಗ್ಡೆ, ನಾಗರಿಕ ಸಮಿತಿ, ನಿರಶನ