ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಆಡ್ವಾಣಿ ರಥಯಾತ್ರೆ ಯಾವ ಪುರುಷಾರ್ಥಕ್ಕೆ: ಪರಮೇಶ್ವರ್ (Congress | BJP | Advani | parameshwar | Illegal mining | Lokayukta | Karnataka News | Bangalore News,)
parameshwar
PR
ಬಿಜೆಪಿ ಪಕ್ಷದಲ್ಲೇ ಸಾಕಷ್ಟು ಮಂದಿ ಭ್ರಷ್ಟರು ತುಂಬಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ಯಾವ ಪುರುಷಾರ್ಥಕ್ಕೆ ರಥಯಾತ್ರೆ ಕೈಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸೋಮವಾರ ಕೂಡಲಸಂಗಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,ಭ್ರಷ್ಟಾಚಾರದ ವಿರುದ್ಧ ಅಡ್ವಾಣಿ ರಥಯಾತ್ರೆ ಮಾಡುವ ಮೊದಲು ಬಿಜೆಪಿ ಪಕ್ಷದಲ್ಲೇ ಇರುವ ಭ್ರಷ್ಟಚಾರವನ್ನು ನಿಗ್ರಹಿಸಲು ಕ್ರಮ ಕೈಗೊಳ್ಳಲಿ ಎಂದು ತಿರುಗೇಟು ನೀಡಿದರು.

ಅಲ್ಲದೇ ಅಕ್ರಮ ಗಣಿಗಾರಿಕೆ ಕುರಿತಂತೆ ಲೋಕಾಯುಕ್ತರು ಈಗಾಗಲೇ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಈವರೆಗೂ ತಪ್ಪಿತಸ್ಥ ಅಧಿಕಾರಿಗಳು, ಸಚಿವರು, ಶಾಸಕರ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಮೀಲಾಗಿರುವ ಅಧಿಕಾರಿಗಳಿಗೆ ನೋಟಿಸ್ ಕೂಡ ನೀಡಿಲ್ಲ ಎಂದ ಪರಮೇಶ್ವರ್, ಅಕ್ರಮ ಗಣಿ ವಿಚಾರದಲ್ಲಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರೆ ಅವರ ಬಗ್ಗೆ ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕಾಂಗ್ರೆಸ್, ಬಿಜೆಪಿ, ಆಡ್ವಾಣಿ, ಪರಮೇಶ್ವರ್, ಅಕ್ರಮ ಗಣಿ, ಲೋಕಾಯುಕ್ತ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ